ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳೆಂದು ಪರಿಚಯಿಸಿಕೊಂಡು ವೃದ್ಧೆಯನ್ನು ಹಲವು ತಿಂಗಳುಗಳ ಕಾಲ ಮಾನಸಿಕ ಒತ್ತಡದಲ್ಲಿ ಇಟ್ಟಿದ್ದರು.
ಲಕ್ಷ್ಮೀ ರಾಮಮೂರ್ತಿ ಎಂಬ ಮಹಿಳೆ ಶಿವಾಜಿನಗರ ಪ್ರದೇಶದಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಅವರು ಹಿಂದೆ ದುಬೈನಲ್ಲಿ ಶಿಕ್ಷಕಿಯಾಗಿದ್ದರು. ಇತ್ತೀಚೆಗೆ ಬೆಂಗಳೂರು ಮತ್ತು ಮುಂಬೈಯಲ್ಲಿದ್ದ ಕೆಲವು ಆಸ್ತಿಗಳನ್ನು ಮಾರಾಟ ಮಾಡಿದ್ದು, ಅಮೆರಿಕಾದಲ್ಲಿ ವಾಸಿಸುವ ಮಕ್ಕಳ ಬಳಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಇದೇ ಮಾಹಿತಿ ಸೈಬರ್ ಖದೀಮರ ಕೈಗೆ ಸಿಕ್ಕಿದ್ದು, ಅವರನ್ನು ಟಾರ್ಗೆಟ್ ಮಾಡಲಾಯಿತು.

ಜನವರಿ ತಿಂಗಳಲ್ಲಿ ವೃದ್ಧೆಗೆ ಕರೆ ಮಾಡಿದ ವಂಚಕರು, “ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದಿವೆ” ಎಂದು ಹೆದರಿಸಿದರು. ಬಳಿಕ “ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ”, “ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ” ಎಂದು ನಕಲಿ ದಾಖಲೆಗಳು, ವೀಡಿಯೊ ಕರೆಗಳು ಹಾಗೂ ನಕಲಿ ಅಧಿಕಾರಿಗಳ ಮೂಲಕ ನಂಬಿಕೆ ಮೂಡಿಸಿದರು.
ಅವರು ವೃದ್ಧೆಗೆ:
ಎಂದು ಬೆದರಿಕೆ ಹಾಕಿದ್ದರು.
ಫೆಬ್ರವರಿಯಿಂದ ಏಪ್ರಿಲ್ವರೆಗೆ ಒಟ್ಟು 26 ವ್ಯವಹಾರಗಳ ಮೂಲಕ ₹24 ಕೋಟಿ ಹಣವನ್ನು 23 ವಿವಿಧ “ಮ್ಯೂಲ್ ಅಕೌಂಟ್”ಗಳಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆ ತಮ್ಮ ಜೀವಮಾನ ಸಂಗ್ರಹವನ್ನೇ ಕಳೆದುಕೊಂಡಿದ್ದಾರೆ.
ವಂಚಕರು “ಹಣವನ್ನು ತಾತ್ಕಾಲಿಕವಾಗಿ ಪರಿಶೀಲನೆಗಾಗಿ ವರ್ಗಾಯಿಸಿ, ಬಳಿಕ ಮರಳಿ ನೀಡಲಾಗುತ್ತದೆ” ಎಂದು ಹೇಳಿ ಮೋಸ ಮಾಡಿದ್ದಾರೆ. ವೃದ್ಧೆ ಭಯದಿಂದ ತಮ್ಮ ಬ್ಯಾಂಕ್ ಖಾತೆಗಳ ಹಣ, ಫಿಕ್ಸ್ಡ್ ಡಿಪಾಸಿಟ್ಗಳನ್ನೂ ವರ್ಗಾಯಿಸಿದ್ದಾರೆ.
ಘಟನೆಯ ತಿರುವು ಬಂದದ್ದು, ವೃದ್ಧೆ ಸುಮಾರು 1.3 ಕೆಜಿ ಚಿನ್ನಾಭರಣವನ್ನು ಬ್ಯಾಂಕ್ನಲ್ಲಿ ತಾಕತ್ತು ಇಟ್ಟು ಮತ್ತಷ್ಟು ಹಣ ಪಡೆಯಲು ಹೋಗಿದ್ದಾಗ. ಬ್ಯಾಂಕ್ ಮ್ಯಾನೇಜರ್ಗೆ ಅನುಮಾನ ಬಂದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ವಿಚಾರಣೆ ನಡೆಸಿದಾಗ ವೃದ್ಧೆ ಹಲವು ತಿಂಗಳುಗಳಿಂದ “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಮೋಸಕ್ಕೆ ಒಳಗಾಗಿರುವುದು ಬಹಿರಂಗವಾಯಿತು. ಬಳಿಕ ಅವರ ವಿದೇಶದಲ್ಲಿದ್ದ ಮಕ್ಕಳಿಗೂ ಮಾಹಿತಿ ನೀಡಲಾಯಿತು.
ಈ ಪ್ರಕರಣದಲ್ಲಿ ಮುಂಬೈ, ದೆಹಲಿ, ಅಲಹಾಬಾದ್ ಸೇರಿದಂತೆ ವಿವಿಧ ರಾಜ್ಯಗಳ ಐವರನ್ನು ಬಂಧಿಸಲಾಗಿದೆ. ಪೊಲೀಸರು ₹60 ಲಕ್ಷ ಹಣವನ್ನು ಫ್ರೀಜ್ ಮಾಡಿದ್ದು, ಹಣದ ಹಾದಿಯನ್ನು ಇನ್ನಷ್ಟು ಖಾತೆಗಳವರೆಗೆ ಪತ್ತೆಹಚ್ಚುತ್ತಿದ್ದಾರೆ.
“ಡಿಜಿಟಲ್ ಅರೆಸ್ಟ್” ಎಂಬುದು ನಕಲಿ ಸೈಬರ್ ಮೋಸದ ಹೊಸ ತಂತ್ರ. ವಂಚಕರು ಪೊಲೀಸ್, CBI, ED, RBI ಅಥವಾ ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ:
ಎಂದು ಹೇಳಿ ಭಯ ಹುಟ್ಟಿಸುತ್ತಾರೆ. ನಂತರ ವೀಡಿಯೊ ಕಾಲ್ ಮೂಲಕ ನಕಲಿ ತನಿಖೆ ನಡೆಸಿ ಹಣ ವರ್ಗಾಯಿಸಲು ಒತ್ತಾಯಿಸುತ್ತಾರೆ.

ಸೈಬರ್ ಪೊಲೀಸರು ಸಾರ್ವಜನಿಕರಿಗೆ ಈ ರೀತಿಯ ಕರೆಗಳು ಬಂದರೆ:
ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…