ಆರೋಗ್ಯ

ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

1209

ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ.  ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.

ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್‍ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.

ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್‍ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.

ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???

ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-

  • ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು.
  • ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
  • ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.

 

 

ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-

  •   ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ.
  • ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ.
  • ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ  ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ನೆನಪಿಡಿ:-  ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.

ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….      

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…