News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

6027

ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್‌ಗಳಿವೆ.

ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.

ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-

ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.

ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.

ಸರಳ ಜೀವನ:-

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!

ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ದೇಶ-ವಿದೇಶ

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!