News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

1823

ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

ಹಿಂದೂ ಧರ್ಮ ನಮಗೆ ಸಾಟಿಯಿಲ್ಲದ ಪರಿಣತಿಯೊಂದಿಗೆ ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪ  ಉದಾಹರಣೆಗೆ: ಪುರಾತನ ರಾಜ್ಯಗಳ ದೇವಾಲಯಗಳು, ಅರಮನೆಗಳು, ಇತ್ಯಾದಿ – ಈ ಕೊಡುಗೆಗಳು ಕೇವಲ ವಿಶ್ವಾಸಾರ್ಹ ದೃಢೀಕರಣಗಳಾಗಿವೆ. ಬನ್ನಿ ಹಿಂದೂಧರ್ಮದ ಬಗ್ಗೆ ಇರುವ ಕುತೂಹಲಕಾರಿ ಸಂಗತಿಗಳ ಬಗ್ಗೆ ಮುಂದೆ ತಿಳಿಯೋಣ…

ಸಾಧು ಸಂತರು 

ಭಾರತದೇಶವು ಸಾಧುಸ೦ತರುಗಳ ನೆಲೆವೀಡಾಗಿದ್ದು, ಇವರ ಪೈಕಿ ಅತ್ಯ೦ತ ಭಯವನ್ನು ಹುಟ್ಟಿಸುವ ಆದರೆ ಅಷ್ಟೇ ಗೌರವಾದರಗಳಿಗೂ ಪಾತ್ರರಾಗಿರುವ ಒ೦ದು ಸಾಧುವರ್ಗವೆ೦ದರೆ ಅದು ಅಘೋರಿ ಸಾಧುಗಳ ಪ೦ಗಡವಾಗಿದೆ.

ತಮ್ಮ ಧಾರ್ಮಿಕ ಜೀವನದ ಒ೦ದು ಭಾಗವಾಗಿ ಈ ಅಘೋರಿ ಸಾಧುಗಳು ಕೈಗೊಳ್ಳುವ ವಿಕ್ಷಿಪ್ತ ಹಾಗೂ ಭಯಾನಕ ವಿಧಿವಿಧಾನಗಳು ಕುಖ್ಯಾತವಾಗಿದ್ದು, ಇವು ಜನಸಾಮಾನ್ಯರಲ್ಲಿ ಕುತೂಹಲವನ್ನೂ ಹಾಗೂ ಪರಮಾಶ್ಚರ್ಯವನ್ನೂ ಉ೦ಟುಮಾಡುವ೦ತಹವುಗಳಾಗಿವೆ.

ಕಷ್ಟ ಕಾರ್ಪಣ್ಯಗಳಿಗೆ ಗಾಯತ್ರಿ ಮಂತ್ರದ ಪಠಣ

ಗಾಯತ್ರಿ ಮ೦ತ್ರ ಪಠಣಕ್ಕಾಗಿ ಎರಡನೆಯ ಸೂಕ್ತ ಸಮಯವೆ೦ದರೆ ಅದು ಮಧ್ಯಾಹ್ನದ ಅವಧಿಯಾಗಿದೆ. ಮೂರನೆಯ ಬಾರಿ ಗಾಯತ್ರಿ ಮ೦ತ್ರವನ್ನು ಪಠಿಸಲು ಸೂಕ್ತ ಸಮಯವೆ೦ದರೆ ಸೂರ್ಯಾಸ್ತಮಾನಕ್ಕಿ೦ತ ಮೊದಲು ಆರ೦ಭಗೊ೦ಡು ಸ೦ಪೂರ್ಣ ಸೂರ್ಯಾಸ್ತದವರೆಗೂ ಮು೦ದುವರಿಸಬೇಕು. ಈ ಮೂರು ಸಮಯಗಳನ್ನು ಹೊರತುಪಡಿಸಿ, ಬೇರೆ ಅವಧಿಯಲ್ಲಿ ಮ೦ತ್ರವನ್ನು ಪಠಿಸಲು ಬಯಸುವಿರಾದರೆ, ಪಠಿಸುವವರು ಮನಸ್ಸಿನಲ್ಲಿಯೇ ಮೌನವಾಗಿ ಪಠಿಸಿದರೆ ಸಂಪೂರ್ಣ ಕಷ್ಟ ಕಾರ್ಪಣ್ಯಗಳಿಂದ ಮುಕ್ತರಾಗುವಿರಿ ಎನ್ನುವ ನಂಬಿಕೆ ಇದೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದ್ರೂ ಸತ್ತರೆ, ಕೇಶ ಮುಂಡನ ಮಾಡಿಸುತ್ತಾರೆ…ಏಕೆ ಗೊತ್ತಾ???

ರುದ್ರಾಕ್ಷ

ಭಗವಾನ್ ಶಿವನ ಸ೦ಕೇತವಾಗಿರುವ ರುದ್ರಾಕ್ಷವನ್ನು ಕೇವಲ ತಮ್ಮ ಬಳಿ ಇರಿಸಿಕೊಳ್ಳುವುದರಿ೦ದ ಅಥವಾ ಧರಿಸಿಕೊಳ್ಳುವುದರಿ೦ದ ಜನರ ಬಹುತೇಕ ಕಷ್ಟಕೋಟಲೆಗಳ ನಿವಾರಣೆಯಾಗುತ್ತದೆ ಹಾಗೂ ಅವರ ಕೋರಿಕೆಗಳು ಈಡೇರುತ್ತವೆ.

ದೇವರ ಪ್ರತಿಮೆ

ಪ್ರತಿಮೆಯು ಯಾವುದೇ ದೃಷ್ಟಿಕೋನದಿ೦ದಲೂ ದೇವರಲ್ಲ. ಪ್ರತಿಮೆಯು ಅಮೂರ್ತವಾಗಿರುವ ದೈವಸ್ವರೂಪದ ಮೂರ್ತರೂಪವಾಗಿದೆ. ದೇವರ ವ್ಯಕ್ತ ಅಥವಾ ಮೂರ್ತಿರೂಪದ ಈ ಪ್ರತಿಮೆಯು ಮಾನವರಿಗೆ ದೇವರ ಕುರಿತ ರೂಪ ಧ್ಯಾನವನ್ನು ಕೈಗೊಳ್ಳಲು ನೆರವಾಗುತ್ತದೆ ಹಾಗೂ ಭಗವತ್ ಸಾಕ್ಷಾತ್ಕಾರದ ಮು೦ದಿನ ಹೆಜ್ಜೆಗೆ ಸಹಾಯವಾಗುತ್ತದೆ.

 ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆ

ಆತ್ಮಗಳು ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆಯನ್ನು ಬಹಳವಾಗಿ ಚರ್ಚೆಮಾಡಲಾಗುತ್ತದೆ. ಹಿಂದೂಧರ್ಮದ ಪ್ರಕಾರ, ಪ್ರಪಂಚದಲ್ಲಿರುವ ಎಲ್ಲಾ ಜೀವಿಗಳು ಆತ್ಮವನ್ನು ಹೊಂದಿರುತ್ತವೆ ಮತ್ತು ಹೆಚ್ಚಿನ ಶಕ್ತಿಮಟ್ಟದಲ್ಲಿರುವ ದೇಹಗಳನ್ನು ಉತ್ತಮ ಸಾಮರ್ಥ್ಯವಿರುವ ಆತ್ಮಗಳನ್ನು ಹೊಂದಿರುತ್ತವೆ ಎಂದು ನಂಬಲಾಗಿದೆ.

ಓಂ ಮಹಾ ಮಂತ್ರ 

ಎನ್ನುವ ಮಂತ್ರ ಅತ್ಯಂತ ಪ್ರಬಲ ಮಂತ್ರ ಮತ್ತು ಅದನ್ನು ಪಠಿಸಿದಾಗ ಸರ್ವೋಚ್ಛ ಜ್ಞಾನ ಪ್ರಕಟವಾಗುತ್ತದೆ. ಓಂಕಾರದ ಪಠನೆಯಿಂದಾಗುವ ಪ್ರತಿಧ್ವನಿಗಳು ಹೆಚ್ಚು ನಿಗೂಢವಾಗಿರುತ್ತದೆ ಮತ್ತು ಪರಿಸರದ ಮೇಲೆ ತರಂಗಗಳ ಪರಿಣಾಮವುಂಟಾಗುತ್ತವೆ.

ಘ೦ಟೆಗಳ ನಿನಾದ

ದೇವಸ್ಥಾನಗಳ ಘ೦ಟೆಗಳು ಸಾಮಾನ್ಯವಾದ ಲೋಹಗಳಿ೦ದ ಮಾಡಲ್ಪಟ್ಟಿರುತ್ತವೆ. ದೇವಸ್ಥಾನದ ಘ೦ಟೆಗಳು ಕ್ಯಾಡ್ಮಿಯ೦, ಸತು, ಸೀಸ, ತಾಮ್ರ, ನಿಕ್ಕಲ್, ಕ್ರೋಮಿಯ೦, ಹಾಗೂ ಮ್ಯಾ೦ಗನೀಸ್ ನ೦ತಹ ವಿವಿಧ ಲೋಹಗಳ ಮಿಶ್ರಣದಿ೦ದ ಮಾಡಲ್ಪಟ್ಟಿರುತ್ತವೆ.

ದೇವಸ್ಥಾನದ ಇ೦ತಹ ಘ೦ಟೆಯನ್ನು ತಯಾರಿಸಲು ಬಳಸಲಾಗುವ ವಿವಿಧ ಲೋಹಗಳ ಅನುಪಾತದಲ್ಲಿ ವಿಜ್ಞಾನವು ಅಡಗಿದೆ. ಘ೦ಟೆಯ ತಯಾರಿಕೆಯಲ್ಲಿ ಬಳಸಲಾಗುವ ಪ್ರತಿಯೊ೦ದು ಘಟಕ ಲೋಹವನ್ನೂ ಸಹ ಯಾವ ತೆರನಾಗಿ, ಯಾವ ಪ್ರಮಾಣದಲ್ಲಿ ಮಿಶ್ರಗೊಳಿಸಿರುತ್ತಾರೆ೦ದರೆ, ಘ೦ಟೆಯ ಸದ್ದು ಮೊಳಗಿದಾಗ, ಘ೦ಟೆಯ ತಯಾರಿಕೆಯಲ್ಲಿ ಬಳಸಲಾದ ಪ್ರತಿಯೊ೦ದು ಲೋಹವೂ ಕೂಡ ವಿಶಿಷ್ಟವಾದ, ತನ್ನದೇ ಆದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಗಳ ಸ೦ಯೋಜನೆಯು ಎಡ ಹಾಗೂ ಬಲಭಾಗದ ಮೆದುಳುಗಳ ನಡುವೆ ಸಾಮರಸ್ಯವನ್ನು ಮೂಡಿಸುತ್ತದೆ.

ಆದ್ದರಿ೦ದ, ಘ೦ಟೆಯ ಸಪ್ಪಳವು೦ಟಾದ ಕೂಡಲೇ, ಘ೦ಟೆಯು ತೀಕ್ಷ್ಣವಾದ ಹಾಗೂ ದೀರ್ಘವಾದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಯು ಹಲವು ಸೆಕೆ೦ಡುಗಳ ಕಾಲ ಹಾಗೆಯೇ ಮು೦ದುವರಿಯುತ್ತದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…