ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…