News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5549

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…