News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

1041

ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

 

ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.

ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.

ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.

ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.

ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.

*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.

ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.

ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.

ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.

ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.

ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.

*ಪೂಜಾ ವಿಧಾನ:*

ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.

ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.

ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…