ಆಧ್ಯಾತ್ಮ

ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

6535

ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.

ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.

ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-

ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!

ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.

ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.

ರುದ್ರಾಕ್ಷವನ್ನು ಧರಿಸುವ ಬಗೆ :-

ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.

ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :- 

  • 108 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಮಸ್ತ ಕಾರ್ಯಗಳಲ್ಲೂ ಯಶಸ್ಸು,ವಂಶವನ್ನು ಉದ್ಧಾರಮಾಡುವ ಸಾಮರ್ಥ್ಯ ಸಿಗುತ್ತದೆ. ಈ ಮಾಲೆಯನ್ನು ಮನೋಕಾಮನೆಗಳು ಈಡೇರಲು ಹಾಗೂ ಜಪ ತಪಾದಿ ಕಾರ್ಯಗಳಲ್ಲಿ ಧರಿಸುತ್ತಾರೆ.
  • 140 ರುದ್ರಾಕ್ಷಿಗಳಿರುವ ಸರವನ್ನು ಧರಿಸುವುದರಿಂದ ಸಾಹಸ,ಪರಾಕ್ರಮ ಹಾಗೂ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ. ದೀರ್ಘಾಯುಷ್ಯವನ್ನು ಬಯಸುವವರು ಈ ಮಾಲೆಯನ್ನು ಧರಿಸುತ್ತಾರೆ.
  • ಮೋಕ್ಷವನ್ನು ಬಯಸುವವರು 100 ರುದ್ರಾಕ್ಷಿಗಳುಳ್ಳ ಮಾಲೆ ಧರಿಸುತ್ತಾರೆ.
  • 50 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಕಂಠದಲ್ಲಿ ಧರಿಸುವುದರಿಂದ ಶುಭಪ್ರಾಪ್ತಿಯಾಗುತ್ತದೆ.
  • ಧನಧಾನ್ಯಗಳನ್ನು ಬಯಸುವವರು 62 ರುದ್ರಾಕ್ಷಿಗಳಿರುವ ಮಾಲೆ ಧರಿಸುತ್ತಾರೆ.
  • 32 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸುವುದರಿಂದ ಧನಸಂಪತ್ತು ಹಾಗೂ ದೀರ್ಘಾಯುಷ್ಯ ಲಭಿಸುತ್ತದೆ.
  • 26 ರುದ್ರಾಕ್ಷಿಗಳಿರುವ ಮಾಲೆಯನ್ನು ತಲೆಯ ಮೇಲೆ ಧರಿಸುವುದರಿಂದ ಬುದ್ಧಿಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
  • 15 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಂತ್ರಸಿದ್ಧಿ ಹಾಗೂ ತಂತ್ರಸಿದ್ಧಿಕಾರ್ಯಗಳಿಗೆ ಬಳಸಲಾಗುತ್ತದೆ.
  • 12 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸುವುದರಿಂದ ವಿಘ್ನಗಳ ಪರಿಹಾರವಾಗುತ್ತದೆ.

26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,

50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,

16  ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,

12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…