ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…