News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

2975

ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.


ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.

ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.

ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?

ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.

ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.

ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ

ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.

ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ.  ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.

 

ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?

ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.

ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ  ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಉಪಯುಕ್ತ ಮಾಹಿತಿ

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ,ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…