ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…