ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.