ವ್ಯಕ್ತಿ ವಿಶೇಷಣ

ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

4214

ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..

ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.

ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.

ಆ ಬಾಲಕ ಯಾರು ಗೊತ್ತಾ?

ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-

ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!

ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…

ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!

ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-

ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…