ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…