ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()