ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಪಗಳ ತಾಯಿ ಯಾರೂ? ಅವಳು ತನ್ನ ಮಕ್ಕಳಿಗೆ ಶಾಪ ಕೊಡಲು ಕಾರಣವೇನು ? ಇವೆಲ್ಲದರ ಬಗ್ಗೆ ತಿಳಿಯುವ ಕುತೂಹಲ ಇದೆಯಲ್ಲವೇ! ಹಾಗಾದ್ರೆ ಮುಂದೆ ಓದಿ….
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು. ವಿನತೆಗೆ ಅರುಣ ಮತ್ತು ಗರುಡ ಎಂಬ ಮಕ್ಕಳಾದವು. ಅರುಣನು ಸೂರ್ಯನ ಸಾರಥಿಯದನು. ಗರುಡನು ಮಹಾಶಕ್ತಿಶಾಲಿಯಾಗಿ ಬೆಳೆದನು. ವಿನತೆಯ ಮಗನಾದ್ದರಿಂದ ಗರುಡನಿಗೆ ವೈನತೆಯ ಎಂದೂ ಹೆಸರಿದೆ.
ಹೀಗಿರುವಾಗ ದೇವತೆಗಳು ರಾಕ್ಷಸರು ಅಮೃತಕ್ಕಾಗಿ ಕ್ಷೀರಸಾಗರವನ್ನು ಕಡೆದರು . ಆಗ ಕ್ಷೀರಸಾಗರದಿಂದ ಉದ್ಬವವಾದ ಅನೇಕ ವಸ್ತುಗಳಲ್ಲಿ ಉಚ್ಚೈಶ್ರವನ್ನು ಎಂಬ ಕುದುರೆಯೂ ಒಂದು. ಆ ಕುದುರೆಯೂ ಹಾಲಿನಂತೆ ಬೆಳ್ಳಗಿತ್ತು. ಅತ್ಯಾಕರ್ಷವಾಗಿತ್ತು. ಅದನ್ನು ನೋಡುವ ಸಲುವಾಗಿ ಮೂರು ಲೋಕದಿಂದಲೂ ಜೀವಿಗಳು ಬರುತ್ತಿದ್ದರು.
ಕದ್ರು ಮತ್ತು ವಿನಯತೆಯರಿಗೂ ಆ ಕುದರೆಯನ್ನು ಕಾಣುವ ತವಕ ಉಂಟಾಯಿತು. ಆ ಕುದುರೆ ಹೇಗಿದೆಯೂ ಎಂದು ಅವರಿಬ್ಬರೇ ಚರ್ಚಿಸಿದರು. ವಿನತೆಯು ‘’ಕುದುರೆ ಪೂರ್ತಿ ಬೆಳ್ಳಗಿದೆಯಂತೆ. ಒಂದೇ ಒಂದು ಕಪ್ಪು ಚುಕ್ಕೆಯು ಇಲ್ಲವಂತೆ’’ – ಎಂದಳು. ಕದ್ರುವು, ‘’ ಅದು ಹೇಗೆ ಸಾಧ್ಯ ? ಇನ್ನೇನು ಇಲ್ಲದಿದ್ದರೂ ಅದರ ಬಾಲವಾದರು ಕಪ್ಪಗಿರಬೇಕಲ್ಲವೇ ?’’ – ಎಂದಳು. ವಿನತೆ ‘’ಇಲ್ಲ ಬಾಲವೂ ಬೆಳ್ಳಗಿದೆಯಂತೆ’’ ಎಂದಳು. ಕದ್ರು ‘’ಸಾಧ್ಯವೇ ಇಲ್ಲ, ಬೇಕಾದರೆ ಪಂದ್ಯ ಕಟ್ಟೋಣ’’ – ಎಂದಳು. ‘’ಏನು ಪಂದ್ಯ ?’’ – ಎಂದಾಗ ‘’ಕುದುರೆಯೂ ಪೂರ್ತಿ ಬೆಳ್ಳಗಿದ್ದರೆ, ಜೀವನಪೂರ್ತಿಯಾಗಿ ನಾನು ನಿನ್ನ ಸೇವಕಿಯಗಿರುತ್ತೇನೆ. ಕುದುರೆಯೂ ಬಾಲ ಕಪ್ಪಾಗಿದ್ದರೆ ನೀನು ನನ್ನ ಸೇವಕಿಯಗಿರಬೇಕು ‘’ ಎಂದಳು. ವಿನತೆ ಇದಕ್ಕೆ ಒಪ್ಪಿದಳು. ಇಬ್ಬರೂ ಕುದುರೆಯನ್ನು ನೋಡಿ ಬರುವುದೆಂದು ನಿಶ್ಚಯಿಸಿದರು.
ವಿನೋದವಾಗಿ ಶುರುವಾದ ಮಾತು ತುಂಬ ದೊಡ್ಡದಾಗಿ ಹೋಯಿತು ಕದ್ರುವಿಗೂ ಕುದುರೆಯೂ ಬಾಲ ಕಪ್ಪಾಗಿದೆ ಎಂದು ನಂಬಿಕೆಯಿಲ್ಲ. ಎಲ್ಲರೂ ಕುದುರೆಯೂ ಪೂರ್ಣ ಬೆಳ್ಳಗಿದೆ ಎನ್ನುತ್ತಿದ್ದಾರೆ. ಆದರೆ ಯಾವುದೋ ಭಂಡ ಧೈರ್ಯದಿಂದ ಪಂದ್ಯ ಕಟ್ಟಿದ್ದಳು ಈಗ ಹೇಗಾದರೂ ಮಾಡಿ ಫಂದ್ಯದಲ್ಲಿ ಬೇಕೆಂದು ಯೋಚಿಸಿದಳು. ತನ್ನ ಮಕ್ಕಳಾದ ಸರ್ಪಗಳನ್ನು ಕರೆದಳು ಶೇಷ, ವಾಸುಕಿ, ತಕ್ಷಕ, ಕಾರ್ಕೋಟಕ ಮೊದಲಾದ ಸರ್ಪಗಳು ತಾಯಿಯ ಬಳಿಗೆ ಬಂದವು. ಕದ್ರುವು ತನಗೂ ವಿನತೆಗೂ ನಡೆದ ಮಾತುಕತೆಗಳನ್ನು ವಿವರಿಸಿದಳು ‘’ನೀವೆಲ್ಲರೂ ಹೋಗಿ ಆ ಕುದುರೆಯ ಬಾಲವನ್ನು ನಿಮ್ಮ ಶರೀರದಿಂದ ಮುಚ್ಚಿಬಿಡಿ. ಅದು ಕಪ್ಪಾಗಿ ಕಾಣುತ್ತದೆ. ನಾನು ಪಂದ್ಯದಲ್ಲಿ ಗೆದ್ದಂತಾಗುತ್ತದೆ’’ – ಎಂದಳು.
ಸರ್ಪಗಳು ‘’ಅಮ್ಮಾ ! ನಾವು ಈ ರೀತಿ ಮೋಸ ಮಾಡುವುದು ತಪ್ಪಲ್ಲವೇ ?’’ ಎಂದೂ ಕೇಳಿದವು. ಕದ್ರುವು ಕೂಪಗೊಂಡವು ‘’ನನ್ನ ಮಾತಿಗೆ ಎದುರುತ್ತರ ನೀಡುವಿರಾ ? ನನ್ನ ಮಾತಿಗೆ ಎದುರುತ್ತದೆ ನೀಡುವಿರಾ ? ನನ್ನ ಮಾತು ಮೀರಿದರೂ ಅಗ್ನಿಕುಂಡದಲ್ಲಿ ಬಿದ್ದು ಸಾಯುವಂತಾಗಲಿ’’ – ಎಂದು ಶಾಪ ಕೊಟ್ಟಳು. ಸರ್ಪಗಳು ದುಃಖ – ಭಯಗಳಿಂದ ತಾಯಿಯು ಹೇಳಿದಂತೆ ಉಚ್ಚೈಶ್ರವಸ್ಸಿನ ಬಾಲವನ್ನು ಹಿಡಿದುಕೊಂಡವು. ಅನಂತರ ಕದ್ರು ಮತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯ ಬಾಲವೂ ಮಾತ್ರ ಕಪ್ಪಾಗಿತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯೂ ಬಾಲವೂ ಮಾತ್ರ ಕಪ್ಪಾಗಿತ್ತು. ವಿನತೆಯು ತನ್ನ ಸೋಲನೋಪ್ಪಿಕೊಂಡು ಕದ್ರುವಿನ ಸೇವಕಿಯಾದಳು. ಇಲ್ಲಿ ಓದಿ:-ಆ ದಿನ ಈ ಯಾಗವೇನಾದರೂ ನಡೆದಿದ್ದರೆ, ಸರ್ಪಗಳ ವಂಶವೇ ಇರುತ್ತಿರಲಿಲ್ಲ..!
ಹೀಗೆ ವಿನತೆಯು ಕದ್ರುವಿನ ಸೇವಕಿಯದ್ದರಿಂದ ವಿನತೆಯು ಮಗನಾದ ಗರುಡನು ಸಹ ಕದ್ರು ಮತ್ತು ಅವಳ ಮಕ್ಕಳು ಹೇಳಿದಂತೆ ಮದುತ್ತಿರಬೇಕಾಯಿತು. ಸರ್ಪಗಳ ಗರುಡನನ್ನು ತಮ್ಮ ಸೇವಕನಂತೆ ಹಿನಾಯವಾಗಿ ನಡೆಸಿಕೊಳ್ಳಲಾರಂಬಿಸಿದವು. ಇದರಿಂದ ಗರುಡನ ಮನಸ್ಸಿಗೆ ಬಹಳ ದುಃಖವಾಯಿತು. ಹೇಗಾದರೂ ಮಾಡಿ ತನ್ನ ಮತ್ತು ತನ್ನ ತಾಯಿಯ ದಾಸ್ಯವನ್ನು ಹೋಗಲಾಡಿಸಬೇಕು ಎಂದು ಅವನು ಯೋಚಿಸಿದನು.
ಗರುಡನು ಸರ್ಪಗಳ ಬಳಿಗೆ ಹೋಗಿ ‘’ಅಯ್ಯಾ ! ನಾನು ನಿಮಗೆ ಏನ್ ಏನು ಕೆಲಸವನ್ನು ಮಾಡಿಕೊಟ್ಟರೆ ನಮ್ಮ ತಾಯಿಯ ದಾಸ್ಯವು ಹೋಗುತ್ತದೆ ತಿಳಿಸಿ’’ ಎಂದು ಕೇಳಿದನು. ಅದಕ್ಕೆ ಸರ್ಪಗಳ ತಮ್ಮ ತಾಯಿಯಿಂದ ತಮಗೆ ಬಂದ ಶಾಪವನ್ನು ನೆನೆಪಿಸಿಕೊಂಡು ‘’ ದೇವಲೋಕದಿಂದ ಅಮೃತವನ್ನು ತಂದದುಕೊಟ್ಟರೆ ನಿಮ್ಮ ಭಂಧವಿಮೊಚನೆಯಾಗುವುದು’’ – ಎಂದು ತಿಳಿಸಿದವು.
ಕೂಡಲೇ ಗರುಡನು ಆಕಾಶಕ್ಕೆ ಚಿಮ್ಮ್ಕಿದನು. ತನ್ನ ವಿಶಾಲವಾದ ರೆಕ್ಕೆಗಳನ್ನು ಪಟಪಟನೆ ಬಡಿಯುತ್ತ ವಯುವೆಗದಿಂದ ದೇವಲೋಕದ ಕಡೆ ಹಾರಿದನು. ಅವನು ಹಾರಿದ ರಭಸಕ್ಕೆ ದೊಡ್ಡ ದೊಡ್ಡ ವೃಕ್ಷಗಳು ಬಿದ್ದುಹೊದವು. ಪರ್ವತಗಳು ಅಲ್ಲಾಡಿ ಹೋದವು. ಅಂತಹ ವೇಗದಿಂದ ಗರುಡನು ದೇವಲೋಕಕ್ಕೆ ಬಂದನು.
ಗರುಡನು ಅಮೃತವನ್ನು ಕೊಂಡೊಯ್ಯಲು ಬರುತ್ತಿರುವನೆಂದು ತಿಳಿದ ದೇವೆಂದ್ರನು ಸೈನ್ಯವು ಗರುಡನ ಮೇಲೆ ಎರಗಿತು. ಆದರೆ ಗರುಡನು ಒಂದೇ ಕ್ಷಣದಲ್ಲಿ ಆ ಸೈನ್ಯದ ಧಾಳಿಯನ್ನು ನಿವರಿಸಿಕೊಂಡನು. ದೇವಲೋಕದ ಅಮೃತದ ಕುಂಭವನ್ನು ತೆಗೆದುಕೊಂಡು ಹೋಗಿ ಸರ್ಪಗಳ ಮುಂದಿಟ್ಟನು. ಹೀಗೆ ಸರ್ಪಗಳ ಕೋರಿಕೆಯನ್ನು ಈಡೇರಿಸಿ ಅವನು ತನ್ನ ತಾಯಿ ವಿನತೆಯ ದಾಸ್ಯವನ್ನು ಹೋಗಲಾಡಿಸಿದನು.
ಅಮೃತಕುಂಭವನ್ನು ತರುವ ಸಮಯದಲ್ಲಿ ಗರುಡನು ಪ್ರದರ್ಶಿಸಿದ ವಾಯುವೆಗವನ್ನು ಕಂಡು ಮಹಾವಿಷ್ಣುವಿಗೆ ಬಹಳ ಆನಂದವಾಯಿತು. ಅವನು ಗರುಡನನ್ನು ಕುರಿತು ‘’ಅಯ್ಯಾ ! ನೀನು ನನ್ನ ವಾಹನವಾಗಿರು’’ ಎಂದು ಕೇಳಿಕೊಂಡನು. ಗರುಡನು ಅದಕ್ಕೆ ಸಂತೋಷದಿಂದ ಒಪ್ಪಿಕೊಂಡನು. ಹೀಗೆ ಗರುಡನು ವಿಷ್ಣುವಾಹನನಾದನು.
ಸರ್ಪಗಳೆನೋ ಕದ್ರುವು ಹೇಳಿದಂತೆ ಕುದುರೆಯ ಬಾಲವನ್ನು ಹಿಡಿದು ಪಂದ್ಯದಲ್ಲಿ ಅವಳನ್ನು ಗೆಲ್ಲಿಸಿದುವು. ಆದರೆ ಅವಳು ಆ ಮುಂಚೆ ಅವರಿಗೆ ಕೊಟ್ಟಿದ್ದ ಶಾಪ ಮಾತ್ರ ಹಾಗೆಯೇ ಇತ್ತಲ್ಲ. ಆ ಶಪದಿಂದಾಗುವ ದುಷ್ಪರಿಣಾಮವನ್ನು ತಪ್ಪಿಸಿಕೊಳ್ಳುವುದು ಹೇಗೆಂದು ಅವರೆಲ್ಲ ಯೋಚಿಸಿದರು. ಗರುಡನೇನೋ ಅವರಿಗೆ ಅಮೃತವನ್ನು ತಂದುಕೊಟ್ಟಿದ್ದನು. ಆದರೆ ಇಂದ್ರನು ಅಪಹರಿಸಿಕೊಂಡು ಹೋದುದರಿಂದ ಅವರಿಗೆ ಅದು ದಕ್ಕಿರಲಿಲ್ಲ.
ಆಗ ಏಳಪತ್ರನೆಂಬ ಸರ್ಪವು ‘’ನಾವು ಈಗಲೇ ಸೂಕ್ತವಾದ ಸಂಬಂಧವನ್ನು ಹುಡುಕಿ, ನಮ್ಮ ತಂಗಿ ಜರತ್ಕ್ರಾರುವಿನ ಮದುವೆಯನ್ನು ಮಾಡಿಬಿಡೊಣ. ಅವಳ ಹೊಟ್ಟೆಯಲ್ಲಿ ಹುಟ್ಟುವ ಮಗನು ಬೇರೆ ವಂಶಕ್ಕೆ ಸೇರುವುದರಿಂದ, ಅವನಿಗೆ ನಮ್ಮ ತಾಯಿಯ ಶಾಪದ ಭೀತಿ ಇರುವುದಿಲ್ಲ. ಅವನು ಯಾವುದಾದರೂ ಯೋಜನೆಯಿಂದ ನಮಗೊದಗಿರುವ ದುರವಸ್ತೆಯನ್ನು ತಪ್ಪಿಸಲು ಯತ್ನಿಸಬಹುದು’’- ಎಂದನು ಸರ್ಪಗಳ ಜರತ್ಕಾರವನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಿದರು. ಮುಂದೆ ಜರತ್ಕಾರು ಅಸ್ತೀಕ ಎಂಬ ಮಗನಿಗೆ ಜನ್ಮ ಕೊಟ್ಟಳು. ಆಸ್ತಿಕನು ಸಕಲ ವಿದ್ಯಾಪಾರಂಗತನಾಗಿ ಬೆಳೆದನು’’
ಉಗ್ರಶ್ರವ ಸೌತಿಗಳು ಇಷ್ಟು ಕಥೆಯನ್ನು ಹೇಳಿ ಮತ್ತೆ ಜನಮೇಜಯ ಸರ್ಪಯಾಗದ ಬಗ್ಗೆ ಹೇಳಲಾರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…