ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
KOLAR NEWS PAPER 25-12-2022
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…