News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

4880

ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ  ವೃಶ ಕಪಿ ಅವತಾರ.

ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ  ಕರೆದುಕೊಂಡು ಹೋಗುತ್ತಾನೆ.

ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ.  ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.

ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.

ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.

ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ  ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.

ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.

ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.

ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು  ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.

ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.

 ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ 

ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.

ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.

ವೃಶ ಕಪಿ ಅವತಾರ

ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.

ಜೈ ಶ್ರೀ ರಾಮ್…

ಜೈ ಹನುಮಾನ್…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…