ಸಂಬಂಧ

ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

1520

ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ   ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.

ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.

ರಕ್ಷಾಬಂಧನ ಹಬ್ಬದ ಮಹತ್ವ:-

 

  • ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.

  • ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ

ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…

ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ.  ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.

ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.

ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ.  ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…