ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….