ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…