ರಾಜಕೀಯ

ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

1492

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.

ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್​ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್​ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.

ಆತನನೇ ಹಾರ್ದಿಕ್ ಪಟೇಲ್​.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್​​ನಲ್ಲಿ ಜನಸಾಗರವೇ ಸೇರಿತ್ತು.

ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್​ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್​ರ ಭಾಷಣ ಕೇಳ್ತಿದ್ರು.

ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್​ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್​ನಲ್ಲಿ ನೆಲೆಯೂರಿದ್ದಾರೆ.

ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್​ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..

ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್​ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್​ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್​ನಾದ್ಯಂತ ಬಂದ್ ಮಾಡಲಾಯಿತು.

ಈ ಹಾರ್ದಿಕ್ ಪಟೇಲ್​ ಯಾರು ಗೊತ್ತಾ?

ಗುಜರಾತ್​ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್​ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್​ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್​.

ಇವರು 1993 ರಲ್ಲಿ, ಗುಜರಾತ್​ನ ಅಹಮದಾಬಾದ್​ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ  ಇವರ​ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು​ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.

ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ,  ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್​ ವಲ್ಲಭಾಯ್ ಪಟೇಲ್ ಗ್ರೂಪ್ಸ್​​ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.

ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್​ ​ಅನಾಮತ್ ಆಂದೋಲನ್​ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್​ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.

ಈ ಹಾರ್ದಿಕ್ ಪಟೇಲ್​ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?

ಗುಜರಾತ್​ನ ಅಹಮದಾಬಾದ್​ನಲ್ಲಿ, ಆಗಸ್ಟ್​ 17, 2015 ನೇ ತಾರೀಕು  ಒಂದು ಬೃಹತ್​ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ​ಹಾರ್ದಿಕ್ ಪಟೇಲ್​ರನ್ನ​ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..

ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!