ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…