ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…