News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

1075

ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.

ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.

ಹೀಗಾಗಿ ಭಾರತದ ಖ್ಯಾತ ಶಟಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-

ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್‍‍ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.

ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-

ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.

 

ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.

ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…