ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…