ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.
ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.
ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.
ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.
ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.
ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು. ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.
ಭಾರತೀಯರು ಹೇಗಿದ್ದರೂ ಬಂದ್ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ