ರಾಜಕೀಯ

ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

1201

ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು,  ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್‌’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್‌ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.

 

7.30 ರ ವೇಳೆಗೆ ಕ್ಯಾಂಟೀನ್‌ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್‌ನಲ್ಲಿ  1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್‌ ಹೋಗಿರುವ ಬಗ್ಗೆ ವರದಿಯಾಗಿದೆ.

ಇಂದಿರಾ ಕ್ಯಾಂಟೀನ್‌ ತಿಂಡಿ ಬಗ್ಗೆ ಜನರ ಅಭಿಪ್ರಾಯ:-

ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.

ಇಂದಿರಾ ಕ್ಯಾಂಟೀನ್‌’ನ ಮೆನು ಹೀಗಿದೆ ನೋಡಿ:-

ಇಂದಿರಾ ಕ್ಯಾಂಟೀನ್‌ ಬೆಳಗ್ಗಿನ ಉಪಹಾರ

ಸಾಂಬಾರ್‌ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್‌, ಚಿತ್ರಾನ್ನ, ವಾಂಗಿಬಾತ್‌, ಬಿಸಿಬೇಳೆಬಾತ್‌, ಮೆಂತ್ಯೆಪಲಾವ್‌, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್‌ ನೀಡಲಾಗುತ್ತಿದೆ. ಖಾರಾಬಾತ್‌ ಮತ್ತು ಕೇಸರಿಬಾತ್‌ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.

ಮಧ್ಯಾಹ್ನದ ಹಾಗೂ ರಾತ್ರಿ ಊಟ

ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್‌, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್‌, ಖಾರಾಬಾತ್‌,

ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ? 

ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ​ಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’​ಆರಂಭಿಸಿದ್ದಾರೆ.

ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-

ನಮ್ಮ ಅಪ್ಪಾಜಿ ಕ್ಯಾಂಟೀನ್‌’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.

ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.

“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.

ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…