ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.
7.30 ರ ವೇಳೆಗೆ ಕ್ಯಾಂಟೀನ್ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್ನಲ್ಲಿ 1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್ ಹೋಗಿರುವ ಬಗ್ಗೆ ವರದಿಯಾಗಿದೆ.
ಇಂದಿರಾ ಕ್ಯಾಂಟೀನ್ ತಿಂಡಿ ಬಗ್ಗೆ ಜನರ ಅಭಿಪ್ರಾಯ:-
ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.
ಇಂದಿರಾ ಕ್ಯಾಂಟೀನ್’ನ ಮೆನು ಹೀಗಿದೆ ನೋಡಿ:-
ಇಂದಿರಾ ಕ್ಯಾಂಟೀನ್ ಬೆಳಗ್ಗಿನ ಉಪಹಾರ
ಸಾಂಬಾರ್ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್, ಚಿತ್ರಾನ್ನ, ವಾಂಗಿಬಾತ್, ಬಿಸಿಬೇಳೆಬಾತ್, ಮೆಂತ್ಯೆಪಲಾವ್, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್ ನೀಡಲಾಗುತ್ತಿದೆ. ಖಾರಾಬಾತ್ ಮತ್ತು ಕೇಸರಿಬಾತ್ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.
ಮಧ್ಯಾಹ್ನದ ಹಾಗೂ ರಾತ್ರಿ ಊಟ
ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್, ಖಾರಾಬಾತ್,
ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ?
ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ಆರಂಭಿಸಿದ್ದಾರೆ.
ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-
ನಮ್ಮ ಅಪ್ಪಾಜಿ ಕ್ಯಾಂಟೀನ್’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, 10 ರೂ.ಗೆ ಪೊಂಗಲ್, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್ ಬಾತ್, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.
ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.
“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.
ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….