ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…