ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…