ಉಪಯುಕ್ತ ಮಾಹಿತಿ

ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

1283

ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ… 

ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು    ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.

ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ    ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…

ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?

ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-

‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.

ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-

‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’

 ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ

ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.

ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ  ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ  ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!

ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.

‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-

ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.

ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.

ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.

ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…