News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕದ ಸಾಧಕರು

ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

9011

ಸಾಧಕ-೧ ,  ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.

( ನಿಮ್ಮ ಅಭಿಪ್ರಾಯ ಮತ್ತು ಮುಂದಿನ  ಸಾಧಕರನ್ನು ನೀವೇ ನಮಗೆ ತಿಳಿಸಿ )

“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

  • ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
  • ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ “ಧಾರವಾಡ ದ ಅಜ್ಜ” ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.

ಸಾಹಿತ್ಯ

ಬೇಂದ್ರೆ ಸ್ಮಾರಕ, ಧಾರವಾಡ

ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

  • ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಅವರು 1954ನೇ ಇಸವಿಯಲ್ಲಿ ತಯಾರಾದ ವಿಚಿತ್ರ ಪ್ರಪಂಚ ಎಂಬ ಚಿತ್ರಕ್ಕೆ ಸಾಹಿತ್ಯ ಹಾಗೂ ಗೀತೆಗಳನ್ನು ರಚಿಸಿದ್ದರೆಂದು ಆ ವರ್ಷದ ನವಂಬರ್ ತಿಂಗಳ ಚಂದಮಾಮ ಪತ್ರಿಕೆಯ ಜಾಹೀರಾತೊಂದು ತಿಳಿಸುತ್ತದೆ.
  • ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
  • ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
  • ಇವರು ಬರೆದ “ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ” ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ.
  • ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆ ಕೊನೆಗೆ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು. ಇವರನ್ನು ಕನ್ನಡದ “ಕನ್ನಡದ ಠಾಗೋರ್” ಎಂದು ಕರೆಯಲಾಗುತ್ತದೆ. “ನಮನ” ಬೇಂದ್ರೆಯವರಿಗೆ ಸಂಖ್ಯೆಗಳು ಹೊಸ ಲೋಕವೊಂದನ್ನು ತೆರೆದಿದದ್ವವು. ಬೇಂದ್ರೆ ಮನಸಿಗೆ 441 ಹಾಗೂ ಹೃದಯಕ್ಕೆ 881 ಎಂದು ಸಂಖ್ಯೆ ನೀಡಿದ್ದರು.

ಬೇಂದ್ರೆಯವರ ಸಾಹಿತ್ಯ

ಕವನ ಸಂಕಲನ

(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು

  • ೧೯೨೨: ಕೃಷ್ಣಾಕುಮಾರಿ;
  • ೧೯೩೨: ಗರಿ;
  • ೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
  • ೧೯೩೭: ಸಖೀಗೀತ;
  • ೧೯೩೮: ಉಯ್ಯಾಲೆ;
  • ೧೯೩೮: ನಾದಲೀಲೆ;
  • ೧೯೪೩: ಮೇಘದೂತ (ಕಾಳಿದಾಸನ ಸಂಸ್ಕೃತ ಮೇಘದೂತದ ಕನ್ನಡ ಅವತರಣಿಕೆ)
  • ೧೯೪೬: ಹಾಡುಪಾಡು;
  • ೧೯೫೧: ಗಂಗಾವತರಣ;
  • ೧೯೫೬: ಸೂರ್ಯಪಾನ;
  • ೧೯೫೬: ಹೃದಯಸಮುದ್ರ;
  • ೧೯೫೬: ಮುಕ್ತಕಂಠ;
  • ೧೯೫೭: ಚೈತ್ಯಾಲಯ;
  • ೧೯೫೭: ಜೀವಲಹರಿ;
  • ೧೯೫೭: ಅರಳು ಮರಳು;
  • ೧೯೫೮: ನಮನ;
  • ೧೯೫೯: ಸಂಚಯ;
  • ೧೯೬೦: ಉತ್ತರಾಯಣ;
  • ೧೯೬೧: ಮುಗಿಲಮಲ್ಲಿಗೆ;
  • ೧೯೬೨: ಯಕ್ಷ ಯಕ್ಷಿ;
  • ೧೯೬೪: ನಾಕುತಂತಿ;
  • ೧೯೬೬: ಮರ್ಯಾದೆ;
  • ೧೯೬೮: ಶ್ರೀಮಾತಾ;
  • ೧೯೬೯: ಬಾ ಹತ್ತರ;
  • ೧೯೭೦: ಇದು ನಭೋವಾಣಿ;
  • ೧೯೭೨: ವಿನಯ;
  • ೧೯೭೩: ಮತ್ತೆ ಶ್ರಾವಣಾ ಬಂತು;
  • ೧೯೭೭: ಒಲವೇ ನಮ್ಮ ಬದುಕು;
  • ೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
  • ೧೯೮೨: ಪರಾಕಿ;
  • ೧೯೮೨: ಕಾವ್ಯವೈಖರಿ;
  • ೧೯೮೩: ತಾ ಲೆಕ್ಕಣಕಿ ತಾ ದೌತಿ;
  • ೧೯೮೩: ಬಾಲಬೋಧೆ;
  • ೧೯೮೬: ಚೈತನ್ಯದ ಪೂಜೆ;
  • ೧೯೮೭: ಪ್ರತಿಬಿಂಬಗಳು;

ವಿಮರ್ಶೆ

  • ೧೯೪೦: ಸಾಹಿತ್ಯಸಂಶೋಧನೆ;
  • ೧೯೪೫: ವಿಚಾರ ಮಂಜರಿ;
  • ೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
  • ೧೯೫೯: ಮಹಾರಾಷ್ಟ್ರ ಸಾಹಿತ್ಯ;
  • ಸಾಯೋ ಆಟ (ನಾಟಕ)
  • ೧೯೬೨: ಕಾವ್ಯೋದ್ಯೋಗ;
  • ೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
  • ೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
  • ೧೯೭೬: ಕುಮಾರವ್ಯಾಸ ಪುಸ್ತಿಕೆ;

ಪ್ರಶಸ್ತಿ, ಪುರಸ್ಕಾರ, ಬಿರುದು

  • ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ.
  • ೧೯೫೮ರಲ್ಲಿ ‘ಅರಳು ಮರಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
  • ೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರಿಗೆ ಸನ್ಮಾನ
  • ೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ “ಸಂವಾದ” ಎಂಬ ಕೃತಿಗೆ ಕೇಳ್ಕರ್ ಬಹುಮಾನ
  • ೧೯೬೮ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಲಭಿಸಿತು
  • ೧೯೭೩ರಲ್ಲಿ ‘ನಾಕುತಂತಿ’ ಕೃತಿಗೆ ಜ್ಞಾನಪೀಠಪ್ರಶಸ್ತಿ
  • ಕಾಶಿ ವಿದ್ಯಾಪೀಠ, ವಾರಣಾಸಿ, ಮೈಸೂರು ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯಗಳ ಗೌರವ ಡಾಕ್ಟರೇಟ್
  • ಕೇಂದ್ರ ಸಾಹಿತ್ಯ ಅಕಾಡೆಮಿಯ ಫೆಲೋಷಿಪ್ ಪಡೆದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.