News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
govt, modi

ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

1282

ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.

  • ಗೋವುಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ 7 ವರ್ಷ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
  • ಗೋವು ಮಾಲೀಕ ಮಾರಾಟ ಮಾಡಿದ್ದು ಹಾಗೂ ಖರೀದಿದಾರ ರಸೀದಿ ಹೊಂದಿರಬೇಕು.
  • ಗೋವು ಮಾರಾಟಕ್ಕೆ ಯೋಗ್ಯವೇ ಎಂಬುದನ್ನು ಮೆಟರ್ನಿಟಿ ವೈದ್ಯರು ನಿರ್ಧರಿಸಬೇಕು. ಅವರ ಅನುಮತಿ ಇಲ್ಲದೇ ಮಾರುವಂತಿಲ್ಲ.
  • ಜಾನುವಾರು ಸಾಗಿಸಲು ಸೂಕ್ತ ದಾಖಲೆ ಹೊಂದಿರುವ ವಾಹನಗಳಲ್ಲೇ ಸಾಗಿಸಬೇಕು.
  • ಹಸು, ದನ ಅಥವಾ ಕರುಗಳ ಕೊಂಬುಗಳಿಗೆ, ಕಾಲುಗಳಿಗೆ ಅಥವಾ ದೇಹದ ಯಾವುದೇ ಭಾಗಗಳಿಗೆ ಯಾವುದೇ ರೀತಿಯ ಬಣ್ಣಗಳನ್ನು ಹಚ್ಚುವಂತಿಲ್ಲ.
  • ಅವುಗಳನ್ನು ಅನವಶ್ಯಕವಾಗಿ ಕೊರಳಿಗೆ ಹಗ್ಗ ಬಿಗಿದು ಕಟ್ಟುವಂತಿಲ್ಲ.
  • ಗೋವು ವಾಸಿಸುವ ಸ್ಥಳಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ, ಉತ್ತಮ ಆಹಾರ, ಶುದ್ಧ ನೀರು ಕೊಡತಕ್ಕದ್ದು.
  • ಪ್ರಾಣಿಗಳಿಗೆ ಯಾವುದೇ ರೀತಿಯ ಅಲಂಕಾರ ಮಾಡುವಂತಿಲ್ಲ. ಒಡವೆ, ಹಾರ ಮುಂತಾದ ಯಾವುದೇ ಅಲಂಕಾರಿಕ ವಸ್ತುಗಳನ್ನು ಹಾಕುವಂತಿಲ್ಲ.
  • ಹಸುವಿನ ಹಾಲು ಕುಡಿಯದಂತೆ ಕರುಗಳ ಬಾಯನ್ನು ಯಾವುದೇ ರೀತಿಯಲ್ಲಿ ಬಂದ್ ಮಾಡುವ ಹಾಗಿಲ್ಲ.
  • ಆ ನಿರ್ದಿಷ್ಟ ಪ್ರಾಣಿಯ ಉಸ್ತುವಾರಿ ಹೊತ್ತಿರುವ ಮನುಷ್ಯ, ಪ್ರಾಣಿಗೆ ಈ ಮೇಲ್ಕಂಡ ಯಾವುದೇ ತೊಂದರೆ ನೀಡಲಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು. ಉತ್ತಮ ಆಹಾರ, ನೀರು, ಬೆಳಕು ಸಿಗುತ್ತಿರುವ ಬಗ್ಗೆ ಅರಿವು ಹೊಂದಿರಬೇಕು.
  • ಪ್ರಾಣಿಗಳು ಯಾವುದೇ ರೀತಿಯ ದುರವಸ್ಥೆಯಲ್ಲಿದ್ದರೆ, ಆ ಪ್ರಾಣಿಗಳ ಉಸ್ತುವಾರಿ ಹೊತ್ತಿರುವ ವ್ಯಕ್ತಿಗಳೇ ಆ ತಪ್ಪುಗಳಿಗೆ ಹೊಣೆಗಾರರಾಗುತ್ತಾರೆ.

ಕೇರಳದಲ್ಲಿ ಬಾರಿ ವಿರೋಧ 

ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…