News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
karnataka

ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

1327

ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!

ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.

ಕರ್ನಾಟಕದ ಮೊದಲ ಖಾಸಗಿ ಚಾನೆಲ್…

ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.

ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.

ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.

ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…

ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”

ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-

ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.

ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.

 “ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.

ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.

ಮುಂದೆ ಏನಾಗಬಹುದು…

2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.

ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.

ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.

ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?

ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….