ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.