ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-
ಮಲೇರಿಯಾ :-
ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.
ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಮುನ್ನೆಚ್ಚರಿಕೆ ಏನು:-
ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.
ಡೆಂಗ್ಯೂ:-

ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.
ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.
ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.
ಮುನ್ನೆಚ್ಚರಿಕೆಯೇನು:-
ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.
ವಿಷಮಶೀತ ಜ್ವರ

ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.
ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.
ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.
ಮುನ್ನೆಚ್ಚರಿಕೆ ಕ್ರಮವೇನು:-
ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.
ಚಿಕನ್ಗುನ್ಯಾ:-

ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.
ಮುನ್ನೆಚ್ಚರಿಕೆ ಏನು:-
ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.
ಕಾಲರಾ:-

ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.
ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.
ಮುನ್ನೆಚ್ಚರಿಕೆಯೇನು:-
ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.
ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್ಗಿದೆ. ದೇಹದಲ್ಲಿ ಬೈಲ್ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.
ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.
ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….