News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

1739

ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-

ಮಲೇರಿಯಾ :-

ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.

ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ಮುನ್ನೆಚ್ಚರಿಕೆ ಏನು:-

ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.

ಡೆಂಗ್ಯೂ:-


ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.

ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.

ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.

ಮುನ್ನೆಚ್ಚರಿಕೆಯೇನು:-

ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.

ವಿಷಮಶೀತ ಜ್ವರ


ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.

ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.

ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.

ಮುನ್ನೆಚ್ಚರಿಕೆ ಕ್ರಮವೇನು:-

ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.

ಚಿಕನ್‌ಗುನ್ಯಾ:-


ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್‌ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.

ಮುನ್ನೆಚ್ಚರಿಕೆ ಏನು:-

ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.

ಕಾಲರಾ:-


ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.

ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.

ಮುನ್ನೆಚ್ಚರಿಕೆಯೇನು:-

ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.

ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್‌ಗಿದೆ. ದೇಹದಲ್ಲಿ ಬೈಲ್‌ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.

ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.

ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….