ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…