News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

2895

ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ  ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.

ಮೈಗ್ರೇನ್ ಎಂದರೇನು ?

ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:

ಸಾಮಾನ್ಯವಾಗಿ ಮೈಗ್ರೇನ್‌ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್‌ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್‌ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್‌ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1  ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ  ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.

2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.

3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.

4 . ನಿದ್ರೆ ಮಾತ್ರೆ ಸೇವನೆ,  ಬಿ. ಪಿ.,  ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.

5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ  ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.

6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್  ರೋಗಲಕ್ಷಣಗಳು:

ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು  ಮೈಗ್ರೇನ್‌ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.

ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ  ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು

ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್‌ಷನ್‌-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)

ಮೈಗ್ರೇನ್‌ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು.  ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.

ಮೈಗ್ರೇನ್‌ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ  ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.

 

ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-

1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.

2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.

3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.

  • ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು.
  • ನಿತ್ಯ ವ್ಯಾಯಾಮ.
  • ಸರಿಯಾದ ಊಟದ ಕ್ರಮ. ಪೌಷ್ಟಿಕ ಆಹಾರದ ಸೇವನೆ.
  • ತಂಬಾಕು, ಮದ್ಯ ಸೇವನೆಯಿಂದ ದೂರ ಇರುವುದು. ಕಾಫಿ ಕುಡಿಯುವುದನ್ನು ಕಡಿಮೆ ಮಾಡುವುದು.
  • ಜೀವನದ ಬಗ್ಯೆ ಸಕಾರಾತ್ಮಕ ಮನೋಭಾವ.

ಮುನ್ಸೂಚನೆಗಳು:
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…