ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…