News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1322

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…