News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

954

ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.

ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ:- 

ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ನಲ್ಲಿಕಾಯಿ ಜ್ಯೂಸ್ ತಯಾರಿಸುವ ವಿಧಾನ:-

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ. * ಬ್ಲೆಂಡರ್‌ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿ ಅರೆಯಿರಿ.

* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರು ಸಂಗ್ರಹಿಸಿ.

*ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.

*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.

*ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.

* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…