ಆಧ್ಯಾತ್ಮ

ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

10111

ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

ಶ್ರೀಗಳ ಜನನ ಮತ್ತು ಬಾಲ್ಯ:-

ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.

ಶ್ರೀಗಳ ವಿದ್ಯಾಭ್ಯಾಸ:-

ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.

ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.

ಶ್ರೀಗಳ ಎಂಜಿನಿಯರಿಂಗ್ ಪದವಿ:-

ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್‌ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.

ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್‌ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು

ಅಂದು ನಾಗರಾಜ್ ಕಾಣೆಯಾಗಿದ್ದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ :-

ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.

ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದು:-

`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.

`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.

ನಾಗರಾಜ್ ಆದ್ರು ನಿರ್ಮಲಾನಂದನಾಥ ಸ್ವಾಮೀಜಿ:-

ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.

ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.

ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.

ಶ್ರೀಗಳ ದಿನಚರಿ :-

ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.

ಕೃಪೆ: ಸಂಗ್ರಹ ಮಾಹಿತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…