News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3386

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…