ಕರ್ನಾಟಕ

ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

4387

ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಮೂಲ:

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು  ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.