ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1536

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…