ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.