News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5739

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…