News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5698

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…